ಮಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು ಇಂದು ನಗರದ ಎಸ್ ಡಿಪಿಐ ಕಚೇರಿಯ ಬಾಗಿಲು ಮುರಿದು ಒಳಗೆ ನುಗ್ಗಿ ಪರಿಶೀಲನೆ ನಡೆಸಿದ್ದಾರೆ.
ಎನ್ ಐ ಎ ಅಧಿಕಾರಿಗಳು ಎಸ್ ಡಿ ಪಿ ಐ ಕಚೇರಿಯ ಬೀಗವನ್ನು ಬ್ಲೇಡ್ ನಿಂದ ಕಟ್ ಮಾಡಿ ಕಚೇರಿಯ ಶಟರ್ ತೆರೆದಿದ್ದಾರೆ. ಇದಲ್ಲದೇ ಅಧಿಕಾರಿಗಳು ಒಳಭಾಗದ ಬಾಗಿಲಿನ ನ ಗಾಜನ್ನು ಪುಡಿ ಮಾಡಿದ್ದಾರೆ. ಮಂಗಳೂರಿನ ಕಚೇರಿಯೊಳಗೆ ನುಗ್ಗಿದ ಎನ್ ಐಎ ಅಧಿಕಾರಿಗಳು ಅಲ್ಲಿ ಕೆಲವು ಮಹತ್ವದ ದಾಖಲೆಗಳು ಕಂಪ್ಯೂಟರ್ ಸಿಪಿಯುನ ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಎಸ್ ಡಿಪಿಐ ರಾಜ್ಯ ಮುಖಂಡರೊಬ್ಬರು ಮಾತನಾಡಿ, ದಾಳಿ ಮಾಡುವ ಸಂದರ್ಭದಲ್ಲಿ ಕಚೇರಿಯಲ್ಲಿ ಸಿಬ್ಬಂದಿಯಿದ್ದ. ಆತ ಎನ್ ಐಎ ಅಧಿಕಾರಿಗಳ ಬಳಿ ಪ್ರಶ್ನಿಸುವ ಮೊದಲೇ ಕಚೇರಿಯ ಬೀಗವನ್ನು ಒಡೆದು ನುಗ್ಗಿದ್ದಾರೆ. ಒಂದು ರೀತಿಯ ಅಕ್ರಮ ಪ್ರವೇಶ ಮಾಡಿದ್ದಾರೆ. ಈ ರೀತಿಯ ಘಟನೆಯನ್ನು ಎಸ್ ಡಿಪಿಐ ಖಂಡಿಸುತ್ತದೆ ಎಂದರು.
ಇನ್ನಷ್ಟು ವರದಿಗಳು
ಕರ್ನಾಟಕ ರಾಜ್ಯಸಭಾ ಸದಸ್ಯತ್ವಕ್ಕೆ ನಾಮನಿರ್ದೇಶನ: ನಿವೃತ್ತ ಐ.ಎ.ಎಸ್ ಅಧಿಕಾರಿ ಎಲ್.ಕೆ. ಅತೀಕ್ ಹೆಸರು ಮುಂಚೂಣಿಯಲ್ಲಿ.
ಬೆಂ.ಮುಸ್ಲಿಮ್ ಸಮಾವೇಶದ ಸಂದೇಶ ಸರ್ಕಾರಕ್ಕೆ ರವಾನೆ ಆಗಲಿದೆ : ಮುಸ್ಲಿಮ್ ವಾಯ್ಸ್ ಆನ್ಲೈನ್ ಸಂವಾದದಲ್ಲಿ ರಫಿಉದ್ದೀನ್ ಕುದ್ರೋಳಿ.
ಬೆಂಗಳೂರು, ಮೇ 16. ರಾಜ್ಯ ಮುಸ್ಲಿಮ್ ಸಮ್ಮೇಳನ, ಸರಕಾರದ ಭರವಸೆ, ಈಡೇರಿಕೆ, ನಿರ್ಲಕ್ಷ್ಯಗಳ ವರದಿ ಬಿಡುಗಡೆ.