ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿ, ಸಚಿವ ಅಶ್ವತ್ ನಾರಾಯಣ್,ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕೆಂದು ಪ್ರಚೋದಿತ ಹೇಳಿಕೆ ನೀಡಿರುವುದು ಖಂಡನಾರ್ಹ,ಅಕ್ಸ್ಯಮ್ಮ ಅಪರಾಧ ಕೂಡಾ, ರಾಜ್ಯದ ಪೊಲೀಸು ಮಹಾ ನಿರ್ದೇಶಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕಿದೆ.
ಸಿದ್ದು ವಿರುದ್ಧ ಜಾತಿ ಪ್ರಚೋದಿತ ಹೇಳಿಕೆ ನೀಡಲಾಗಿದೆ. ಮೊದಲು ಟಿಪ್ಪು ಬಗ್ಗೆಗಿನ ಹೇಳಿಕೆ ನೀಡಿ ವೈರಿಯಂತೆ ಬಿಂಬಿಸಲಾಗಿದೆ,ನಂತರ ಟಿಪ್ಪುವಿನ ಹೆಸರಿನೊಂದಿಗೆ ಸಿದ್ದರಾಮಯ್ಯರನ್ನು ಸಮೀಕರಿಸಿ ಬಿಂಬಿಸಲಾಯಿತು, ತದ ನಂತರ ಟಿಪ್ಪುವಿನ ದಾರುಣ ಅಂತ್ಯವನ್ನು ವೈಭವೀಕರಿಸಿ,ಸಿದ್ದರಾಮಯ್ಯನವರ ರಾಜಕೀಯ ಅಂತ್ಯದೊಂದಿಗೆ ಸಮೀಕರಿಸಿ ಪ್ರಚೋದಿತ ಹೇಳಿಕೆ ನೀಡಲಾಗಿದೆ. ಇದು ಮತೀಯ ದ್ವೇಷಿ ತ ಹೇಳಿಕೆ ಆಗಿದೆ. ಸಿದ್ದುವನ್ನು ಗುರಿಯಾಗಿಸಿ,ಟಿಪ್ಪುವನ್ನು ಸಮೀಕರಿಸಿ,ಮುಸ್ಲಿಮ್ ಜನಾಂಗವನ್ನು ವಿರೋಧಿಸುವ ವ್ಯವಸ್ಥಿತ ಷಡ್ಯಂತ್ರದ ಕೇಶವ ಕೃಪಾ ಪ್ರೇರಿತ ಹೇಳಿಕೆ ನೀಡಲಾಗಿದೆ. ಈ ಪ್ರಚೋದನೆ ಜನರಿಗೆ ಮನವರಿಕೆ ಆಗಲು ಅಧಿಕ ಸಮಯ ಬೇಕಾಗಿಲ್ಲ ಎಂದು ಕೆ.ಅಶ್ರಫ್(ಮಾಜಿ ಮೇಯರ್),ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ರವರು ಆಕ್ರೋಶ ವ್ಯಕ್ತಪಡಿಸಿದರು.
ಇನ್ನಷ್ಟು ವರದಿಗಳು
ಬೆಂಗಳೂರು, ಮೇ 16. ರಾಜ್ಯ ಮುಸ್ಲಿಮ್ ಸಮ್ಮೇಳನ, ಸರಕಾರದ ಭರವಸೆ, ಈಡೇರಿಕೆ, ನಿರ್ಲಕ್ಷ್ಯಗಳ ವರದಿ ಬಿಡುಗಡೆ.
ಬೆಂಗಳೂರು: ಏ.23, ಇಂದು ಫ್ರೀಡಮ್ ಪಾರ್ಕ್ ನಲ್ಲಿ ಎಸ್ ಐ ಆರ್ ವಿರೋಧಿ ಬೃಹತ್ ಪ್ರತಿರೋಧ
ಮುಸ್ಲಿಮ್ ಸಂಘಟನೆಗಳಿಂದ ಕಾಂಗ್ರೆಸ್ ವರಿಷ್ಠರಿಗೆ ಅವಹಾಲು ಪತ್ರ, ಬೇಡಿಕೆ ಈಡೇರದಿದ್ದರೆ ಕವಲು ದಾರಿ?.