ವಿಟ್ಲ ಅಡ್ಯನಡ್ಕದಲ್ಲಿ ಸರಕಾರೇತರ ಸಂಘ ಸಂಸ್ಥೆಯು ಸ್ಥಳೀಯ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ನಡೆಸಿದ್ದು, ಈ ಕಾರ್ಯಾಗಾರಕ್ಕೆ,ಮುಸ್ಲಿಮೇತರ ವಿಧ್ಯಾರ್ಥಿಗಳ ಭಾಗವಹಿಸುವಿಕೆಯನ್ನು ವಿರೋಧಿಸಿ ಕೆಲವು ಸಂಘೀ ಯುವಕರು ನುಗ್ಗಿ ದಾಂಧಲೆ ನಡೆಸಿರುವುದು ಖಂಡನೀಯ.
ಮುಂದುವರಿದು, ಈ ಕಾರ್ಯಾಗಾರ ನಡೆಸಿರುವುದೇ ಅನ್ಯಾಯ ಎಂಬಂತೆ ಆಯೋಜಕರು ಮತ್ತು ಸಂಪನ್ಮೂಲ ವ್ಯಕ್ತಿಗಳ ಮೇಲೆ ಸ್ಥಳೀಯ ಪೊಲೀಸು ಸ್ಟೇಶನ್ ನಲ್ಲಿ ಪ್ರಕರಣ ದಾಖಲಿಸಿರುವುದು ತೀವ್ರ ಖಂಡನೀಯ ಮತ್ತು ಸರಕಾರ ಜನರ ಶೈಕ್ಷಣಿಕ ಹಕ್ಕನ್ನು ಕಸಿದು ಕೊಳ್ಳುವ ಪ್ರಯತ್ನವಾಗಿದೆ.
ಕಾರ್ಯಾಗಾರದಲ್ಲಿ ಮುಸ್ಲಿಮೇತರ ವಿಧ್ಯಾರ್ಥಿಗಳು ಭಾಗವಹಿಸಿದ್ದನ್ನು ಆಕ್ಷೇಪಿಸಿರುವುದು, ಸಂಘಿಗಳ ಮನೋಸ್ಥಿತಿಯನ್ನು ಬಹಿರಂಗ ಪಡಿಸುತ್ತದೆ. ಪ್ರಯೋಜನಾರ್ಥಿ ವಿದ್ಯಾರ್ಥಿಗಳನ್ನು ಜಾತಿ, ಧರ್ಮ ಆಧಾರದಲ್ಲಿ ವಿಂಗಡಿಸುವುದು ಅಕ್ಷ್ಟಮ್ಮ ಅಪರಾಧ. ಧಾಳಿ ಕೊರರ ವಿರುದ್ಧ ಪೊಲೀಸರು ಶಾಂತಿ ಭಂಗ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕಿದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟರವರು ಆಗ್ರಹಿಸಿದ್ದಾರೆ.
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: