ಕುಂದಾಪುರ: ಇತ್ತೀಚೆಗೆ ಬಹುಕೋಟಿ ವಂಚನೆ ಆರೋಪಿ ಮತ್ತು ದುರ್ಗಾ ವಾಹಿನಿ ಸಂಘಟನೆಯ ಮುಖ್ಯಸ್ಥೆ ಚೈತ್ರಾ ಕುಂದಾಪುರಳನ್ನು ಬೆಂಗಳೂರು ಸಿ.ಸಿ.ಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಪ್ರದರ್ಶಿಸಿ ,ಹೆಚ್ಚುವರಿ ತನಿಖೆಗಾಗಿ ಪೊಲೀಸ್ ಕಸ್ಟಡಿ ಪಡೆದ ನಂತರ ತನಿಖೆಯ ವೇಳೆ ಅಸ್ವಸ್ಥ ಗೊಂಡ ನಂತರ ಚಿಕಿತ್ಸೆಗಾಗಿ ಚೈತ್ರಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಚೈತ್ರಳ ವಿರುದ್ಧ ಗೋಪಾಲ್ ಪೂಜಾರಿ ಎಂಬವರು ತನಗೆ ಚೈತ್ರಾ ಮತ್ತು ಇತರರು ಬಿಜೆಪಿ ಪಕ್ಷದ ವತಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿತನ ನೀಡಲು ಪಕ್ಷ ವರಿಷ್ಠರಿಗೆ ಶಿಫಾರಸು ಮಾಡುತ್ತೇನೆಂದು ಭರವಸೆ ನೀಡಿ ಅಘಾದ ಮೊತ್ತದ ನಗದು ಹಣ ಪಡೆದು ವಂಚಿಸಲಾಗಿದೆ ಎಂದು ಪ್ರಕರಣದ ದೂರಿನಲ್ಲಿ ಆರೋಪಿಸಲಾಗಿದೆ ಮತ್ತು ಇದು ಬಹುಕೋಟಿ ಮೊತ್ತದ ಅವ್ಯವಹಾರ ಎಂದು ಪ್ರಚಾರವಾಗಿತ್ತು.
ಪ್ರಕರಣದಲ್ಲಿ ಹಲವರು ಬಂಧನಕ್ಕೆ ಒಳಗಾಗಿದ್ದು, ಒರ್ವ ಧಾರ್ಮಿಕ ವ್ಯಕ್ತಿ ಕೂಡಾ ಶಾಮೀಲು ಆಗಿದ್ದು,ಪ್ರಮುಖ ನಾಯಕರ ಪಾತ್ರವೂ ಇದೆ ಎಂದು ಮಾದ್ಯಮದ ಮುಂದೆ ಚೈತ್ರಾ ಹೇಳಿಕೆ ನೀಡಿದ್ದರು.
ಇನ್ನಷ್ಟು ವರದಿಗಳು
ಸೌಜನ್ಯ ಪರ ನ್ಯಾಯಕ್ಕಾಗಿ ಶಾಂತಿಯುತ ಪ್ರಜಾಸತ್ತಾತ್ಮಕ ಪ್ರತಿಭಟನೆ,ಸಭೆಗಳನ್ನು ಆಯೋಜಿಸುವ ಹಕ್ಕಿದೆ: ಕರ್ನಾಟಕ ಉಚ್ಚ ನ್ಯಾಯಾಲಯ.
ಮಹಾಸಭಾ ನಿಯೋಗದಿಂದ ಅಲ್ಪ ಸಂಖ್ಯಾತ ಆಯೋಗ ಆಯುಕ್ತರ ಭೇಟಿ, ಪ್ರತಿ ತಾಲೂಕುಗಳಲ್ಲಿ ಬ್ಯಾರಿಭವನ ನಿರ್ಮಾಣಕ್ಕೆ ಕೋರಿಕೆ.
ರಾಜ್ಯ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪೀಕರ್ ಯು.ಟಿ.ಖಾದರ್ ಮುಖ್ಯಮಂತ್ರಿಗೆ ಪತ್ರ.