ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಾರೀಕು 07 ಏಪ್ರಿಲ್ ರಂದು ಚುನಾವಣೆ ನಡೆಯಲಿದ್ದು ಭಾರತೀಯ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ರವರಿಗೆ ಮತ ನೀಡಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲಿಸಬೇಕೆಂದು ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ರಮಾನಾಥ ರೈ ಕರೆ ನೀಡಿದರು.
ಶಿರಸಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ತನ್ನ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಕಾಂಗ್ರೆಸ್ ಪಕ್ಷ ಮಾತ್ರಾ ಈ ದೇಶವನ್ನು ಮುನ್ನಡೆಸುವ ಪಕ್ಷ ಎಂದು ಹೇಳಿದರು. ಅಂಜಲಿ ನಿಂಬಾಳ್ಕರ್ ಓರ್ವೆ ಸಮರ್ಥ ಅಭ್ಯರ್ಥಿ ಎಂದರು.
ಸಭೆಯಲ್ಲಿ ಶಿರಸಿ ಶಾಸಕ ಭೀಮಣ್ಣ ಟಿ.ನಾಯಕ್, ಮಾಜಿ ಮೇಯರ್ ಗಳಾದ ಕೆ.ಅಶ್ರಫ್,ಶಶಿಧರ್ ಹೆಗ್ಡೆ,ಕೌನ್ಸಿಲರ್ ನವೀನ್ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.
ಇನ್ನಷ್ಟು ವರದಿಗಳು
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ:
ಉಳ್ಳಾಲ, ಪಿಯು: ಅಲ್ ಬಯಾನ್ ಅರಬಿಕ್ ಕಾಲೇಜು: ಶೇ 100 ಫಲಿತಾಂಶ.