ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾಸಭಾ ನಿಯೋಗದಿಂದ ಇಂದು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಅಲ್ಪ ಸಂಖ್ಯಾತ ಆಯೋಗದ ಆಯುಕ್ತರಾದ ನಿಸಾರ್ ಅಹಮದ್ ರವರನ್ನು ಭೇಟಿ ಮಾಡಿ ಕರ್ನಾಟಕದಾದ್ಯಂತ ವಾಸಿಸುತ್ತಿರುವ ಸುಮಾರು ಇಪ್ಪತ್ತೈದು ಲಕ್ಷ ದಷ್ಟು ಜನ ಸಂಖ್ಯೆಯಲ್ಲಿರುವ ಅತಿಸೂಕ್ಷ್ಮ ಅಲ್ಪ ಸಂಖ್ಯಾತ ಮೂಲನಿವಾಸಿ ಬ್ಯಾರಿ ಬಾಷಿತ ಜನಾಂಗದ ಜನರಿಗೆ ವಿವಾಹ ಮತ್ತು ಇನ್ನಿತರ ಕಾರ್ಯಗಳಿಗೆ ಪ್ರಯೋಜನವಾಗುವಂತೆ ಪ್ರತಿ ತಾಲೂಕು ಕೇಂದ್ರಗಳಲ್ಲಿ ಐನೂರು ಜನ ಜಮಾವಣೆ ಸಾಮರ್ಥ್ಯದ ಸುಸಜ್ಜಿತ ಬ್ಯಾರಿ ಜನಾಂಗ ಭವನ ನಿರ್ಮಾಣ ವನ್ನು ಮಾಡಲು ಮನವಿ ಮಾಡಲಾಯಿತು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತ ಇಲಾಖೆ, ಕಂದಾಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಜಂಟಿ ಸಹಯೋಗದೊಂದಿಗೆ ಈ ಯೋಜನೆಯನ್ನು ಅನುಷ್ಠಾನ ಗೊಳಿಸಲು ಶಿಫಾರಸ್ಸು ಮಾಡಲು ಅಪೇಕ್ಷಿಸಲಾಯಿತು. ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ಈ ನಿಯೋಗದಲ್ಲಿ ಮೊಹಮ್ಮದ್ ಹನೀಫ್.ಯು, ಅಬ್ದುಲ್ ಜಲೀಲ್ ( ಅದ್ದು ) ಕೃಷ್ಣಾಪುರ, ಇಬ್ರಾಹಿಮ್ ಬಾವ ಬಜಾಲ್ ಮತ್ತು ಅಬ್ದುಲ್ ಖಾದರ್ ಇಡ್ಮ ರವರು ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ಕರ್ನಾಟಕ ರಾಜ್ಯಸಭಾ ಸದಸ್ಯತ್ವಕ್ಕೆ ನಾಮನಿರ್ದೇಶನ: ನಿವೃತ್ತ ಐ.ಎ.ಎಸ್ ಅಧಿಕಾರಿ ಎಲ್.ಕೆ. ಅತೀಕ್ ಹೆಸರು ಮುಂಚೂಣಿಯಲ್ಲಿ.
ಬೆಂ.ಮುಸ್ಲಿಮ್ ಸಮಾವೇಶದ ಸಂದೇಶ ಸರ್ಕಾರಕ್ಕೆ ರವಾನೆ ಆಗಲಿದೆ : ಮುಸ್ಲಿಮ್ ವಾಯ್ಸ್ ಆನ್ಲೈನ್ ಸಂವಾದದಲ್ಲಿ ರಫಿಉದ್ದೀನ್ ಕುದ್ರೋಳಿ.
ಬೆಂಗಳೂರು, ಮೇ 16. ರಾಜ್ಯ ಮುಸ್ಲಿಮ್ ಸಮ್ಮೇಳನ, ಸರಕಾರದ ಭರವಸೆ, ಈಡೇರಿಕೆ, ನಿರ್ಲಕ್ಷ್ಯಗಳ ವರದಿ ಬಿಡುಗಡೆ.