ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಕ್ಕೆ ರೈಲು ಹತ್ತಲು ಯತ್ನಿಸಿದ ಪ್ರಯಾಣಿಕರು ಏಕಾಏಕಿ ನುಗ್ಗಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ನವದೆಹಲಿ: ಪ್ರಯಾಗ್ರಾಜ್ನಲ್ಲಿನ ಮಹಾಕುಂಭಕ್ಕೆ ರೈಲು ಹತ್ತಲು ಯತ್ನಿಸಿದ ಪ್ರಯಾಣಿಕರ ಹಠಾತ್ ನೂಕು ನುಗ್ಗಲಿನಿಂದ ಶನಿವಾರದಂದು ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂದು ಡಜನ್ಗೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. “ದುರದೃಷ್ಟಕರ ಘಟನೆ” ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಪ್ಲಾಟ್ಫಾರ್ಮ್ ಸಂಖ್ಯೆ 14 ರಲ್ಲಿ ಪ್ರಯಾಗ್ರಾಜ್ ಎಕ್ಸ್ಪ್ರೆಸ್ ರೈಲು ನಿರ್ಗಮನಕ್ಕಾಗಿ ಕಾಯುತ್ತಿದ್ದಾಗ ಅನೇಕ ಜನರು ಉಪಸ್ಥಿತರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ಎಕ್ಸ್ಪ್ರೆಸ್ ಎಂಬ ಎರಡು ಇತರ ರೈಲುಗಳು ವಿಳಂಬಗೊಂಡಿವೆ ಮತ್ತು ಈ ರೈಲುಗಳ ಪ್ರಯಾಣಿಕರು ಪ್ಲಾಟ್ಫಾರ್ಮ್ ಸಂಖ್ಯೆ 12, 13 ಮತ್ತು 14 ನಲ್ಲಿಯೂ ಇದ್ದರು ಎಂದು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯು ದುರದೃಷ್ಟಕರ ಎಂದು ಹೇಳಿದ್ದಾರೆ.
“ನವದೆಹಲಿ ರೈಲು ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಕಾಲ್ತುಳಿತದಿಂದ ಹಾನಿಗೊಳಗಾದ ಎಲ್ಲರಿಗೂ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ” ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ವರದಿಗಳು
ತೆಲಂಗಾಣ ಜಾತಿ ಸಮೀಕ್ಷೆ ಅತ್ಯಗತ್ಯ, ಸರ್ಕಾರದ ದತ್ತಾಂಶ ನಿರ್ವಹಣೆಯನ್ನು ನೋಡಬೇಕಿದೆ: ಸುಜಾತಾ ಸುರೇಪಲ್ಲಿ.
ತಿರುಪತಿ ಕಾಲ್ತುಳಿತ: ಭಕ್ತರ ಸಾವಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂತಾಪ
ಮೆಟ್ರೋ: ಮೊದಲ ನಮೋ ಭಾರತ್ ಸಂಪರ್ಕ: ಜನವರಿ 5 ರಂದು ದೆಹಲಿಯಲ್ಲಿ ಪ್ರಧಾನಿ ಮೋದಿಯಿಂದ ಬೃಹತ್ ಯೋಜನೆಗಳಿಗೆ ಚಾಲನೆ.